ಶಿವಮೊಗ್ಗ : ಜಿಯಲ್ಲಿ ಪ್ರಪ್ರಥಮವಾಗಿ ದೊಡ್ಡ ಮಟ್ಟದ ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನವನ್ನು ಜ.೨೪ ರಿಂದ ೩ ದಿನಗಳ ಕಾಲ ನಗರದ ಫ್ರೀಡಂ ಪಾರ್ಕ್ನಲ್ಲಿ ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಓ ಹೇಮಂತ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
೭೫ನೇ ಗಣರಾಜ್ಯೋತ್ಸವ ನಿಮಿತ್ತ ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಜಿ ಉದ್ಯಾನ ಕಲಾ ಸಂಘದ ಆಶ್ರಯದಲ್ಲಿ ಜ.೨೪ ರಿಂದ ೨೬ ರ ಬೆಳಿಗ್ಗೆ ೯ ಗಂಟೆಯಿಂದ ರಿಂದ ರಾತ್ರಿ ೯ ಗಂಟೆವರಗೆ ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಪುಷ್ಪಸಿರಿ ಹೆಸರಿನಲ್ಲಿ ೬೨ನೇ ಫಲ-ಪುಷ್ಪ ಪ್ರದರ್ಶನ, ಮಲೆನಾಡು ಕರಕುಶಲದ ಸರಸ್ ಮೇಳ ಉತ್ಸವ ಹಾಗೂ ಮನರೇಗಾ ಯೋಜನೆಯ ಮಾಹಿತಿ ಮೇಳ ಹಮ್ಮಿಕೊಳ್ಳ ಲಾಗಿದೆ ಎಂದು ವಿವರಿಸಿದರು.
ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆ ಯಡಿ ಶಿವಮೊಗ್ಗ ಜಿಪಂ ಕ್ರಾಫ್ಟ್ ಆಫ್ ಮಲೆನಾಡು ಎಂಬ ಬ್ರಾಂಡ್ ಮೂಲಕ ಜಿಯ ಮಹಿಳಾ ಸ್ವಸಹಾಯ ಗುಂಪುಗಳ ಮಹಿಳೆ ಯರು ತಯಾರಿಸಿದ ಕರಕುಶಲ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಒಂದು ಬೃಹತ್ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಸ್ವಸಹಾಯ ಸದಸ್ಯರಿಗೆ ತಮ್ಮ ತಮ್ಮ ಪ್ರತಿಭೆಗಳನ್ನು ಮತ್ತು ಕುಶಲಕರ್ಮಿ ಶ್ರೇಷ್ಠತೆಯನ್ನು ಮಾರುಕಟ್ಟೆ ಒದಗಿಸಲು ಸದಾವಕಾಶ ಒದಗಿ ಬಂದಿದೆ.
ಕ್ರಾಫ್ಟ್ ಆಫ್ ಮಲೆನಾಡು ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿಕೊಡಲು ಸಜಗಿದ್ದು, ಈ ಸುವರ್ಣಾವಕಾಶವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು. ವರ್ತಮಾನ ದಲ್ಲಿ ಇಡೀ ಜಗತ್ತನ್ನು ಬೆರಳ ತುದಿಯಲ್ಲಿ ಕಾಣುವಂತಾಗಿದೆ. ಉಡುಗೆ, ತೊಡುಗೆ, ಆಹಾರ ವೆಲ್ಲವೂ ಅಂತಜಲದ ಅಧೀನ ದಲ್ಲಿದೆ. ಆದರೆ ಹಳ್ಳಿಗಳು ಹಾಗೂ ಹಳ್ಳಿಗಳಲ್ಲಿ ತಯಾರಾದ ವಸ್ತುಗಳು ಮಾತ್ರ ಇನ್ನೂ ತನ್ನದೇ ಆದ ಬಲೆ ಎಣೆದುಕೊಂಡು ಬದುಕುತ್ತಿವೆ. ಅದನ್ನು ತೊಡೆದು ಹಾಕಲು ಈ ಕ್ರಾಫ್ಟ್ ಆಫ್ ಮಲೆನಾಡು ಮುಂದಾಗಿದ್ದು, ಆನ್ಲೈನ್ ಮಾರುಕಟ್ಟೆಯ ಮೂಲಕ ಹಳ್ಳಿ ಗಳಲ್ಲಿ ತಯಾರಿಸಿರುವ ವಸ್ತುಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಳ್ಳಲು ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.
ಇನ್ನೂ ಜಿ ಮಟ್ಟದಲ್ಲಿ ಮಲೆನಾಡ ಕರಕುಶಲ ಉತ್ಸವವನ್ನು ಆಯೋಜಿಸಿ ಮಹಿಳೆಯರು ತಯಾರಿಸಿದ ಮಲೆನಾಡಿನ ಹಸೆ ಚಿತ್ತಾರ. ಟೆರಾಕೋಟಾ ಶಿಲ್ಪಗಳ ಉತ್ಪನ್ನಗಳು, ಗುಡಿ ಕೈಗಾರಿಕೆ ಮತ್ತು ವೈರ್ಬ್ಯಾಗ್, ವಿವಿಧ ವಿನ್ಯಾಸ ಕಲೆ ಚಿತ್ತಾರ, ಗೃಹ ಅಲಂಕಾರ ವಸ್ತುಗಳು ಸೇರಿದಂತೆ ವಿವಿಧ ಬಗೆಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲು ಸುವರ್ಣಾವಕಾಶ ನೀಡಲಾಗುತ್ತಿದೆ ಎಂದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವ-ಸಹಾಯ ಸಂಘದ ಸದಸ್ಯರಿಗೆ ದನದ ಕೊಟ್ಟಿಗೆ, ಕುರಿ ಶೆಡ್ ನಿರ್ಮಾಣ ಮತ್ತು ಸ್ವ-ಸಹಾಯ ಸಂಘದ ಕಾರ್ಯ ಚಟುವಟಿಕೆಗಳಿಗೆ ಎನ್.ಆರ್. ಎಲ್.ಎಂ ಶೆಡ್ ನಿರ್ಮಾಣ ಮಾಡಲಾಗುತ್ತದೆ ಹಾಗೂ ನರೇಗಾ ಯೋಜನೆಯಡಿ, ತೋಟಗಾರಿಕೆ ಇಲಾಖೆಯಡಿ ಗ್ರಾಮೀಣ ಭಾಗದ ರೈತರಿಗೆ ತೋಟಗಾರಿಕೆ ಬೆಳೆಗಳಾದ ಅಡಿಕೆ ತೋಟ, ಕಾಳು ಮೆಣಸು, ಎಲೆ ಬಳ್ಳಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದರ ಜೊತೆಗೆ ಮಹಾತ್ಮ ಗಾಂಧಿ ನರೇಗಾ ಯೋಜನೆ, ಎನ್.ಆರ್.ಎಲ್.ಎಂ ಯೋಜನೆ ಮತ್ತು ತೋಟಗಾರಿಕೆ ಇಲಾಖೆ ಯಡಿ ನೀಡಲಾಗುವ ಸೌಲಭ್ಯಗಳು ಕುರಿತು ಅರಿವು ಮೂಡಿಸಲು ಮೇಳ ಸಿದ್ದವಾಗಿದೆ ಎಂದರು.
ಉಚಿತ ಪ್ರವೇಶ: ಫಲಪುಷ್ಪ ಪ್ರದರ್ಶನಕ್ಕೆ ಪ್ರವೇಶ ಉಚಿತ ವಾಗಿದೆ. ಪ್ರದರ್ಶನದಲ್ಲಿ ಒಟ್ಟು ೩೪ ವಿವಿಧ ಉತ್ಪನ್ನಗಳ ಹಾಗೂ ವಿವಿಧ ಇಲಾಖೆಗಳ ಮಳಿಗೆಗಳು ಇರಲಿವೆ. ಹೊರಗೆ ೨೫ ಮಳಿಗೆಗಳನ್ನು ಸ್ಥಾಪಿಸಲಾಗುವುದು. ರೈತರ ವಿಶೇಷ ಬೆಳೆಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದರು.
ಶಿವಮೊಗ್ಗದ ಹೆಸರಾಂತ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಮನೆಯನ್ನು ಪುಷ್ಪಗಳ ಮೂಲಕ ತಯಾರಿ ಮಾಡಿದ್ದು, ಸುಮಾರು ೨೮ ಅಡಿ ಎತ್ತರದ ಹೂವಿನ ಕಲಾಕೃತಿಯ ಕವಿಶೈಲವನ್ನು ನಿರ್ಮಾಣ ಮಾಡಲಾಗುವುದು ಹಾಗೂ ಚಂದ್ರಗುತ್ತಿಯ ರೇಣುಕಾ ದೇವಳ ಮರುಸೃಷ್ಟಿಸಲಾಗುತ್ತಿದ್ದು ಪ್ರದರ್ಶನದ ಆಕರ್ಷಣೆಯಾಗಲಿದೆ ಎಂದರು.
ಈ ಫಲಪುಷ್ಪ ಉತ್ಸವದಲ್ಲಿ ಜಿಯಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಯರು ತಯಾರಿಸಿದ ೧೦೦ಕ್ಕೂ ಹೆಚ್ಚು ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುತ್ತದೆ. ಶಿವಮೊಗ್ಗ ಜಿಯ ಎ ಆತ್ಮೀಯ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉತ್ಸವದಲ್ಲಿ ಭಾಗವಹಿಸಿ ಈ ಅದ್ಭುತ ಪ್ರದರ್ಶನವನ್ನು ಆನಂದಿಸಬೇಕೆಂದು ಕೋರಿದರು. ಇದೇ ವೇಳೆ ಕ್ರಾಫ್ಟ್ ಆಫ್ ಮಲೆನಾಡು ಬ್ರಾಂಡಿಂಗ್ ಕುರಿತಾದ ಪೋಸ್ಟರ್ನ್ನು ಬಿಡುಗಡೆಗೊಳಿಸಲಾಯಿತು.
ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಸವಿತಾ ಜಿ, ಜಿ ಉದ್ಯಾನ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹಾಜರಿದ್ದರು.
ಜ24ರಿಂದ ಕರಕುಶಲ ಉತ್ಸವ – ಫಲಪುಷ್ಪ ಪ್ರದರ್ಶನ…
