ಶಿವಮೊಗ್ಗ : ಕುವೆಂಪು ವಿವಿ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆಯ ಸಹಯೋಗ ದಲ್ಲಿ ಏ. ೧೦ರಿಂದ ೧೨ರವರೆಗೆ ಶಂಕರಘಟ್ಟದ eನಸಹ್ಯಾದ್ರಿ ಬಸವ ಸಭಾಭವನದಲ್ಲಿ ೩ ದಿನಗಳ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ ಕುರಿತ ಅಂತರ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಯೋಜನಾ ಕಾರ್ಯದರ್ಶಿ ಪ್ರೊ| ವಿ. ಕೃಷ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಕುವೆಂಪು ವಿವಿ, ಕೆಳದಿ ಶಿವಪ್ಪನಾಯಕ ವಿವಿಯ ಸ್ನಾತಕೋತ್ತರ ಜೈವಿಕ ತಂತ್ರeನ ವಿಭಾಗ, ಅನ್ವಯಿಕ ಸಸ್ಯಶಾಸ್ತ್ರ ವಿಭಾಗ ಸೇರಿದಂತೆ ಸುಮಾರು ೮ ವಿಭಾಗಳನ್ನೊಳಗೊಂಡು ವ್ಯಾಲ್ಯೂ ಪ್ರೊಡಕ್ಟ್ ಸಂಸ್ಥೆಯ ಸಹಕಾರದಲ್ಲಿ ಮೂರು ದಿನಗಳ ಅಂತರ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಮ್ಮೇಳನದಲ್ಲಿ ಸುಮಾರು ೬೪೪ ಸಂಶೋಧಕರು, ೨೦೦ಕ್ಕೂ ಹೆಚ್ಚು ಪ್ರಬಂಧ ಮಂಡನೆ ಮಾಡುವರು ಭಾಗವಹಿಸುತ್ತಿzರೆ. ರಾಜ್ಯ ಮತ್ತು ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಸಂಶೋಧಕರು ವಿಷಯ ಮಂಡನೆ ಮಾಡುತ್ತಿದ್ದು, ಈಗಾಗಲೇ ಸುಮಾರು ೧೫೦ಕ್ಕೂ ಹೆಚ್ಚು ಜನರು ಹೆಸರು ನೋಂದಾಯಿಸಿzರೆ ಎಂದರು.
ಏ. ೧೦ರಂದು ಬೆಳಗ್ಗೆ ೧೦ ಗಂಟೆಗೆ ಹೈದರಾಬಾದ್ ವಿವಿಯ ವಿಶ್ರಾಂತ ಕುಲಪತಿ ಪ್ರೊ| ಅಪ್ಪಾರಾವ್ ಪೋಡಿಲೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಥೈಲ್ಯಾಂಡ್ನ ವಿವಿ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಸುಖಾಡಾ ಸುಕ್ರೋಂಗ್ ದಿಕ್ಸೂಚಿ ಭಾಷಣ ಮಾಡಲಿzರೆ. ಅಮೆರಿಕದ ಆಲಬಾಮಾ ವಿವಿ ಡಾ. ದರ್ಶನ್, ಕೆಳದಿ ಕೃಷಿ ವಿವಿ ಕುಲಪತಿ ಪ್ರೊ| ಆರ್.ಸಿ. ಜಗದೀಶ್, ಕುವೆಂಪು ವಿವಿ ಕುಲಪತಿ ಪ್ರೊ| ಶರತ್ ಅನಂತಮೂರ್ತಿ, ವ್ಯಾಲ್ಯೂ ಪ್ರಾಡಕ್ಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಎ.ಕೆ. ಶ್ರೀನಿವಾಸ ಮೂರ್ತಿ ಉಪಸ್ಥಿತರಿರುವರು ಎಂದರು.
ಕುವೆಂಪು ವಿವಿ ಕುಲಸಚಿವ ಗೋಪಿನಾಥ್ ಮಾತನಾಡಿ, ಪಶ್ಚಿಮ ಘಟ್ಟದಲ್ಲಿ ಹಲವು ಔಷಧಿ ಸಸ್ಯಗಳಿವೆ. ಈ ಔಷಧಿಯ ಸಸ್ಯ ಗಳಿಂದ ಹಲವು ರೋಗಗಳ ಚಿಕಿತ್ಸೆಗೆ ರಾಮಬಾಣದ ಗುಣಗಳಿವೆ. ಇದನ್ನು ಅಭಿವೃದ್ಧಿಪಡಿಸಿ ಸಮುದಾಯಕ್ಕೆ ತಿಳಿಸಿಕೊಡುವುದು ವಿವಿಗಳ ಕರ್ತವ್ಯವವಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಅನೇಕ ಸಂಶೋಧನೆಗಳು ನಡೆದಿವೆ ಎಂದರು.
ವ್ಯಾಲ್ಯೂ ಪ್ರಾಡಕ್ಟ್ಸ್ ಕಂಪನಿ ಜಿಎಂ ಪ್ರಾಮಾಣೀಕೃತ ಸಂಸ್ಥೆ ಯಾಗಿದ್ದು, ನೋನಿ ಹಣ್ಣಿನಲ್ಲಿರುವ ಔಷಧಿಯ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಮೃತ್ ನೋನಿ ಉತ್ಪನ್ನದ ಮೂಲಕ ಆರೋಗ್ಯಕರ ಜೀವನಶೈಲಿಗೆ ತನ್ನ ಕೊಡುಗೆ ನೀಡಿದೆ. ಈ ಸಂಸ್ಥೆಯ ಸಹಕಾರದಲ್ಲಿ ನೋನಿ ಸಂಶೋಧನಾ ಪ್ರವೃತ್ತಿಗಳು ಸೇರಿದಂತೆ ಮಾನವನ ಆರೋಗ್ಯಕರ ಬದುಕಿಗೆ ಜೀವ ವೈವಿಧ್ಯತೆಯ ಸುಸ್ಥಿರ ಬಳಕೆ ಕುರಿತು ಈ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ವ್ಯಾಲ್ಯೂ ಪ್ರಾಡಕ್ಟ್ಸ್ ನ ಎಂಡಿ ಡಾ. ಎ.ಕೆ. ಶ್ರೀನಿವಾಸಮೂರ್ತಿ ಮಾತನಾಡಿ, ಕಳೆದ ೧೪ ವರ್ಷ ಗಳಿಂದ ನಾವು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದ್ದೇವೆ. ಶಿವಮೊಗ್ಗದಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಇದು. ಹಾಗಾಗಿ ಶ್ರೇಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆ ಗಳೊಂದಿಗೆ ಒಡಂಬಡಿಕೆ ಮಾಡಿ ಕೊಂಡು ಸಮಾಜದಲ್ಲಿ ಸಾರ್ವಜನಿಕರು ಉತ್ತಮ ಆರೋಗ್ಯವನ್ನು ಉತ್ತೇಜಿಸುವಲ್ಲಿ ಜಗತಿ ಮೂಡಿಸುತ್ತಾ ಬಂದಿದೆ. ಅಮೃತ್ ನೋನಿ ಉತ್ಪನ್ನವೇ ಇದಕ್ಕೆ ಉದಾಹರಣೆಯಾಗಿದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯುವ ವಿeನಿಗಳಿಗೆ ಸಂಶೋಧನೆ ಮಾಡಲು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಎರಡು ಪ್ರಮುಖ ವಿವಿಗಳೊಂದಿಗೆ ಸೇರಿ ಈ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಪ್ರೊ| ಬಿ. ತಿಪ್ಪೇಸ್ವಾಮಿ, ಡಾ. ಡಿ. ತಿಪ್ಪೇಶ್, ಕುವೆಂಪು ವಿವಿ ಕುಲಸಚಿವ ಎ.ಎಲ್. ಮಂಜುನಾಥ್, ಪಿಆರ್ಒ ಸತ್ಯಪ್ರಕಾಶ್, ಇಂಚರಾ ನಾಡಿಗ್, ಸಿ.ಎಸ್. ಶಶಿಕಾಂತ್ ನಾಡಿಗ್ ಇನ್ನಿತರರು ಉಪಸ್ಥಿತರಿದ್ದರು.