ಸರ್ವರೂ ಸಂತ ಸೇವಾಲಾಲರ ಆದರ್ಶ ಪಾಲಿಸೋಣ…

ಶಿವಮೊಗ್ಗ,: ಸಂತ ಸೇವಾಲಾಲ್‌ರ ಆದರ್ಶ ಮತ್ತು ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ನಿಜವಾದ ಅರ್ಥವನ್ನು ಕಲ್ಪಿಸಬೇಕಾ ಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ತಿಳಿಸಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಂಜರ ಸಂಘ ಆಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಾನ್ ವ್ಯಕ್ತಿಗಳು ಹಾಗೂ ದಾರ್ಶನಿಕರ ಜೀವನ ಚರಿತ್ರೆ, ಅವರ ತತ್ವ ಮತ್ತು ಆದರ್ಶವನ್ನು ಪ್ರತಿ ಯೊಬ್ಬರು ತಿಳಿಯಬೇಕೆಂಬ ಉದ್ದೇಶ ದಿಂದ ಸರ್ಕಾರ ಜಯಂತಿಗಳನ್ನು ಆಯೋಜಿಸುತ್ತಿದೆ ಎಂದರು.
ಜಯಂತಿಗಳು ಕೇವಲ ಸರ್ಕಾರಿ ಆಚರಣೆಗಳಾಗಿ ಉಳಿಯಬಾರದು. ಎಲ್ಲರೂ ಸೇರಿ ಆಚರಿಸಬೇಕು. ಪ್ರತಿಯೊಬ್ಬರೂ ಕೂಡ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಮತ್ತು ಜೀವನ ಆದರ್ಶ, ಮಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂತ ಸೇವಾಲಾಲ್ ಮಹಾ ಮಠದ ಗೋಶಾಲಾ ಸಮಿತಿ ಅಧ್ಯಕ್ಷ ಎಂ.ವೈ ನಾನ್ಯಾನಾಯ್ಕ್, ಬಂಜರ ಸಂಘದ ಜಿಲ್ಲಾ ಉಪಾಧ್ಯಕ್ಷ ಆಯನೂರು ಶಿವನಾಯ್ಕ್, ಪ್ರಧಾನ ಕಾರ್ಯದರ್ಶಿ ಬಿ.ಆರ್ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸಮಾಜ ಮುಖಂಡರಿದ್ದರು.